ADVERTISEMENT

57ನೇ ವನ್ಯಜೀವಿ ಸಪ್ತಾಹ: ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ಆನೇಕಲ್: 57 ನೇ ವನ್ಯಜೀವಿ ಸಪ್ತಾಹದ ಅಂಗ ವಾಗಿ ಅರಣ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಟ್ಟಣದ ವಿಧಾತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ತೃತೀಯ ಬಹುಮಾನವನ್ನು ಗಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಸವೋತ್ತಮ ಭಾಗವತ್ ಪ್ರಥಮ ಹಾಗೂ ಯು.ವಿ.ಭಾರ್ಗವ ತೃತೀಯ ಬಹುಮಾನಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ತಾ.ನಂ.ಕುಮಾರಸ್ವಾಮಿ, ಕಾರ್ಯದರ್ಶಿ ವಿಧಾತ್ ಹಾಗೂ ಮುಖ್ಯಶಿಕ್ಷಕ ವೆಂಕಟೇಶರೆಡ್ಡಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT