ADVERTISEMENT

ಕೆರೆಗಳ ಅಭಿವೃದ್ಧಿ ಅಗತ್ಯ: ಮೇಟಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 8:30 IST
Last Updated 27 ಡಿಸೆಂಬರ್ 2017, 8:30 IST

ಅಮೀನಗಡ: ‘ಗ್ರಾಮೀಣ ಭಾಗದ ರೈತರ ಅಭಿವೃದ್ಧಿ ದೃಷ್ಟಿಯಿಂದ ರೈತರ ಭೂಮಿಗೆ ನೀರಿಂಗಿಸುವಿಕೆ ಹಾಗೂ ನೀರಿನ ಅಂತರ್ಜಲ ಮಟ್ಟ ಹೆಚ್ಚಿಸುವಲ್ಲಿ ಕೆರೆಗಳ ಅಭಿವೃದ್ಧಿ  ಅಗತ್ಯ’ ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.

ಸಮೀಪದ ಹಿರೇಮಾಗಿ ಗ್ರಾಮದಲ್ಲಿ ಜಲಸಂಪನ್ಮೂಲ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಯಡಿಯಲ್ಲಿ ₹ 3 ಕೋಟಿ ವೆಚ್ಚದಲ್ಲಿ ಹಿರೇಮಾಗಿ ಕೆರೆ ತುಂಬುವ ಏತ ನೀರಾವರಿ ಯೋಜನೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದರು.

‘ಹಿರೇಮಾಗಿ ಕೆರೆ ತುಂಬುವ ಏತ ನೀರಾವರಿಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.ಈ ಕೆರೆಯು ಸುಮಾರು 26.32 ದಶಲಕ್ಷ ಘನ ಮೀಟರ್ ನೀರು ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಈ ಕೆರೆ ತುಂಬುವುದರಿಂದ ಸುತ್ತಮುತ್ತಲಿನ ರೈತರ ನೀರಾವರಿ ಪ್ರದೇಶಗಳಿಗೆ, ದನಕರುಗಳಿಗೆ ನೀರಿನ ಸೌಲಭ್ಯ ಒದಗಿಸಬಹುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.