
ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ಚರಂಡಿಗಳು ಕೊಳಚೆಯಿಂದ ತುಂಬಿವೆ. ಯಾವ ಪ್ರದೇಶಕ್ಕೆ ಹೋದರೂ ಅಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿವೆ. ಸಾರ್ವಜನಿಕರು ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗದೆ ಈಗ ತಾವೇ ಮುಂದಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸ್ಥಳೀಯ ದಲಾಲ ಲೇನ್ನಲ್ಲಿ ದಿನಾಲೂ ಅಲ್ಲಿಯ ನಜೀರ್ ಎಂಬ ಯುವಕ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದಾನೆ.
ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಹೇಳಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇನ್ನೂ ಮುಂದಾದರೂ ನಗರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಈರಣ್ಣ ಜಿಗಜಿನ್ನಿ, ಕಿರಣ ಆಳಗಿ, ಪ್ರಕಾಶ ನಾವಿ, ವಿಶ್ವನಾಥ ಮುಗತಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.