ಬಾಗಲಕೋಟೆ: ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮೇ 16 ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.
ಬೆಳೆಗಾರರಿಂದ ಗ್ರಾಹಕರಿಗೆ ನೇರ ಸಂಪರ್ಕ ಕಲ್ಪಿಸುವ ಮೂಲಕ ಗ್ರಾಹಕರಿಗೆ ಉತ್ತಮ ತಳಿಯ ಮತ್ತು ಗುಣಮಟ್ಟದ ನೈಸರ್ಗಿಕ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರು ಹಾಗೂ ನೆರೆಹೊರೆಯ ಜಿಲ್ಲೆಯ ಮಾವು ಬೆಳೆಗಾರರು, ರೈತರು ಮತ್ತು ಗ್ರಾಹಕರು ಪಾಲ್ಗೊಂಡು ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ರೈತರು ಮೇ 15 ರಂದು ಸಂಜೆ 5 ಗಂಟೆಯೊಳಗಾಗಿ ಆಯಾ ತಾಲ್ಲೂಕು ಸಹಾಯಕ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಬಾದಾಮಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಗಯ್ಯ ಹಿರೇಮಠ ಮೊ.ಸಂಖ್ಯೆ: 89510–88486, ಬಾಗಲಕೋಟೆ ತಾಲ್ಲೂಕಿನ ಮಹಾಂತೇಶ ಹಂಚಿನಾಳ 97424–25773, ಮುಧೋಳ ತಾಲ್ಲೂಕಿನ ಶಶಿಕಾಂತ ಮೋಹಿತೆ 94497–78010, ಜಮಖಂಡಿ ತಾಲ್ಲೂಕಿನ ಮೆಹಬೂಬ್ ಧನ್ನೂರ 99458–56097, ಹುನಗುಂದ ತಾಲ್ಲೂಕಿನ ರತ್ನಾ ಗಾಣಿಗೇರ 99005–14566 ಹಾಗೂ ಬೀಳಗಿ ತಾಲ್ಲೂಕಿನ ಮಹಾಂತೇಶ ಅಚಿಟಿನ 97393–84476ಗೆ ಸಂಪರ್ಕಿಸಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.