ADVERTISEMENT

`ಯಾರೇ ಬಿಜೆಪಿ ಬಿಟ್ಟರೂ ನಷ್ಟವಿಲ್ಲ'

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 8:42 IST
Last Updated 21 ಡಿಸೆಂಬರ್ 2012, 8:42 IST
ಮುಧೋಳ: ಯಾರೇ ಪಕ್ಷ ತ್ಯಜಿಸಿದರೂ ಬಿಜೆಪಿಗೆ ನಷ್ಟವಿಲ್ಲ ಎಂದು ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ  ಹೇಳಿದರು.
 
ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಬಿಜೆಪಿ ರಾಷ್ಟ್ರೀಯ ಪಕ್ಷ. ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಬಿಜೆಪಿ ರಾಜ್ಯದಲ್ಲಿ ಮತ್ತೆ ಬಹುಮತ ಗಳಿಸುತ್ತದೆ. ಕರ್ನಾಟಕ ಜನತೆ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುವದಿಲ್ಲ ಎಂದರು.
 
ನಾಯಿ ಕೊಡೆಗಳಂತೆ ಹುಟ್ಟಿ ಕೊಳ್ಳು ಪಕ್ಷಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ, ಚುನಾವಣೆಯವರೆಗೂ ಎಷ್ಟು ಪಕ್ಷಗಳು ಜೀವಂತವಾಗಿರುತ್ತವೆ ಕಾದು ನೋಡಿ ಎಂದರು.   ನಾನು ಬಿಜೆಪಿ ತ್ಯಜಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲೇ ಇರು ತ್ತೇನೆ. ಪಕ್ಷ ಬದಲಾಯಿಸುವ ಜಾಯ ಮಾನ ನನ್ನದಲ್ಲ ಎಂದರು.   ಬಿ.ಎಚ್.ಪಂಚಗಾಂವಿ,  ಮಹಾಂತೇಶ ಹಿಟ್ಟಿನಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.