ADVERTISEMENT

ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ: ನಿರಾಣಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2013, 9:50 IST
Last Updated 23 ಡಿಸೆಂಬರ್ 2013, 9:50 IST

ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಲ್ಲ  ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಾಲಿ ಸಂಸದರಾಗಿರುವ ಪಿ.ಸಿ.ಗದ್ದಿಗೌಡರೇ ಅಭ್ಯರ್ಥಿಯಾಗಲಿದ್ದಾರೆ ಎಂದರು.

ಯಾರೇ ಅಭ್ಯರ್ಥಿಯಾಗಲಿ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು. ‘ಜಿಲ್ಲೆಯ ಕಾರ್ಯಕರ್ತರು ಲೋಕಸಭೆಯ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ವರಿಷ್ಠರ ನಿರ್ಣಯಕ್ಕೆ ಬದ್ಧವಾಗಿರುವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.