ಜಮಖಂಡಿ: ವೀರ ಸಾವರಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಬಸವ ಭನವದ ಸಮುದಾಯ ಭವನದಲ್ಲಿ ಜೂನ್ 4ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ ಎಂದು ಸ್ವಾತಂತ್ರ್ಯವೀರ ಸಾವರಕರ್ ಪ್ರತಿಷ್ಠಾನ ಜಮಖಂಡಿಯ ಸಂಚಾಲಕ ಶೈಲೇಶ ಆಪ್ಟೆ ತಿಳಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಹರೀಂದ್ರ ಶ್ರೀವಾಸ್ತವ ಮುಖ್ಯ ಭಾಷಣ ಮಾಡುವರು. ಗುಲ್ಬರ್ಗಾದ ಕಾಡಾ ಅಧ್ಯಕ್ಷ ಗಿರೀಶ ಮಟ್ಟೆಣ್ಣವರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕ ಶ್ರೀಕಾಂತ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಜಿ.ಎಸ್. ನ್ಯಾಮಗೌಡ, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಮಾಜಿ ಕೇಂದ್ರ ಸಚಿವ ಸಿದ್ದು ನ್ಯಾಮಗೌಡ, ಮಾಜಿ ಶಾಸಕ ಆರ್.ಎಂ. ಕಲೂತಿ, ಜಿ.ಪಂ. ಸದಸ್ಯ ಶ್ರೀಶೈಲ ದಳವಾಯಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.