ADVERTISEMENT

‘ಅಭಿವೃದ್ಧಿಗೆ ಮಹತ್ವ’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 8:20 IST
Last Updated 12 ಡಿಸೆಂಬರ್ 2013, 8:20 IST

ತೇರದಾಳ(ಬನಹಟ್ಟಿ):  ಪಟ್ಟಣದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು ಅದರಲ್ಲೂ ಮೂಲ ಸೌಕರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದು ಸ್ಥಳೀಯ ಪುರಸಭೆ ಅಧ್ಯಕ್ಷ ಹನಮಂತ ರೋಡನ್ನವರ ತಿಳಿಸಿದರು. ಬುಧವಾರ ಸ್ಥಳೀಯ ಅಲ್ಲಮಪ್ರಭು ದೇವಸ್ಥಾನದ ಹತ್ತಿರ ಪುರಸಭೆ ವತಿಯಿಂದ ಕೊಳವೆ ಬಾವಿ ತೆಗೆಸುವ ಸಂದರ್ಭದಲ್ಲಿ ಪೂಜೆ ನೆರವೇರಿಸಿ  ಅವರು ಮಾತನಾಡಿದರು.

ಪಟ್ಟಣದ ಅಭಿವೃದ್ಧಿಗಾಗಿ ಹಂತ ಹಂತವಾಗಿ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಅರುಣಕುಮಾರ, ಸದಸ್ಯರಾದ ಶ್ರೀಶೈಲ ತೆಳಗಿನಮನಿ, ರಾಜೇಸಾಬ ನಗಾರ್ಜಿ, ಸುರೇಶ ಕಬಾಡಗಿ, ಎಂ.ಸಿ. ತೆಳಗಿನಮನಿ, ಅಲ್ಲಯ್ಯ ದೊಡಮನಿ, ಬಸಪ್ಪ ಮುಕರಿ, ಸುರೇಶ ಮರಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.