ADVERTISEMENT

9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ: ಇದೇ 8 ರಂದು

ವಿಶ್ವಕರ್ಮ ಪ್ರಶಸ್ತಿ: ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಚಿತ್ರ ನಟ ವಿ.ರವಿಚಂದ್ರನ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 5:16 IST
Last Updated 3 ಅಕ್ಟೋಬರ್ 2017, 5:16 IST

ಬಾಗಲಕೋಟೆ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಡಿ ನೇತೃತ್ವದಲ್ಲಿ 9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವವನ್ನು ಇದೇ 8 ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್–ನಂ.1ರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮೌನೇಶ ಪತ್ತಾರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಐದು ಮಂದಿ ಸಾಧಕರಿಗೆ ವಿಶ್ವಕರ್ಮ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ ಹಾಗೂ ಚಿತ್ರ ನಟ ವಿ.ರವಿಚಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಮೂರು ಜನ ವಿಶ್ವಕರ್ಮ ಸಮಾಜದ ಸಾಧಕರಾಗಿರುತ್ತಾರೆ. ಪ್ರಶಸ್ತಿಯು ಚಿನ್ನದ ಪದಕವನ್ನು ಒಳಗೊಂಡಿರಲಿದೆ ಎಂದು ತಿಳಿಸಿದರು.

ಅಂದಿನ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ ಜನರು ಸೇರಲಿದ್ದಾರೆ. ಜಿಲ್ಲೆಯಿಂದ 30 ಸಾವಿರ ಜನ ಭಾಗವಹಿಸಲಿದ್ದು, ಬಾಗಲಕೋಟೆ ತಾಲ್ಲೂಕಿನಿಂದಲೇ 5 ಸಾವಿರ ಜನ ತೆರಳಲಿದ್ದಾರೆ. ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ADVERTISEMENT

ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಮಾಜದ ಬೇಡಿಕೆ ಈಡೇರಿಕೆಗಾಗಿ ಮನವಿ ಸಲ್ಲಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.