ಬಾಗಲಕೋಟೆ: ಇಲ್ಲಿನ ಭೂ ದಾಖಲೆಗಳ ಉಪನಿರ್ದೇಶಕ ಗೋಪಾಲ ಮಾಲಗತ್ತಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಬಾಗಲಕೋಟೆಯ ನವನಗರದಲ್ಲಿರುವ ಗೋಪಾಲ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಗೋಪಾಲ ಮಾಲಗತ್ತಿ ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದಾರೆ ಎಂಬ ದೂರು ಅವರು ಈ ಹಿಂದೆ ಕೆಲಸ ಮಾಡುತ್ತಿದ್ದ ಕೊಪ್ಪಳದಲ್ಲಿ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಕೊಪ್ಪಳ, ವಿಜಯಪುರದಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಎಸಿಬಿ ಡಿವೈಎಸ್ಪಿ ವಿಶ್ವನಾಥ ಚೌಗಲೆ ಸೇರಿದಂತೆ ಎಂಟು ಸಿಬ್ಬಂದಿ ಪರಿಶೀಲನಾ ಕಾರ್ಯದಲ್ಲಿ ತೊಡಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.