ADVERTISEMENT

ಕಾರು ಅಪಘಾತ: ಮೂವರು ಸಾವು

ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಮಸಣ ಸೇರಿದರು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 17:54 IST
Last Updated 24 ಮಾರ್ಚ್ 2020, 17:54 IST
ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಅಪಘಾತಕ್ಕೆ ತುತ್ತಾದ ಕಾರು
ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಅಪಘಾತಕ್ಕೆ ತುತ್ತಾದ ಕಾರು   

ಬಾಗಲಕೋಟೆ: ಕೋವಿಡ್–19 ಹರಡುವಿಕೆ ಭೀತಿಯಿಂದ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಅಪಘಾತದಲ್ಲಿ ಮಸಣ ಸೇರಿದ್ದಾರೆ.ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಟೈರ್ ಸಿಡಿದು ಕಾರು ಉರುಳಿ ಬಿದ್ದಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಕಾರು ಬೆಂಗಳೂರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಗೆ ಹೊರಟಿತ್ತು. ಕಾರಿನಲ್ಲಿದ್ದ ಸುವರ್ಣಾ (32) ಹಾಗೂ ಬಸವಣ್ಣೆಪ್ಪ (81) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಿತಾ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾದರು.

ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹುಂಡೈ ವೆರ್ನಾ ಕಾರು ಟೈರ್ ಸಿಡಿಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಅಲ್ಲಿದ್ದ ಕಲ್ಲು ಬಂಡೆಗಳಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಅಪಘಾತದಲ್ಲಿ ಯಶ್, ಜಾಹ್ನವಿ ಹಾಗೂ ಚಾಲಕ ಪ್ರಭು ಗಾಯಗೊಂಡಿದ್ದಾರೆ. ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.