ADVERTISEMENT

ಅರುಣ ಕಾರಜೋಳ ಜನ್ಮದಿನಕ್ಕೆ ಸಮವಸ್ತ್ರದಲ್ಲೇ ಶುಭ ಕೋರಿದ ಪೊಲೀಸ್: ಚರ್ಚೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 21:27 IST
Last Updated 26 ಜೂನ್ 2022, 21:27 IST
   

ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರ‌ ಅರುಣ ಕಾರಜೋಳ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿರುವ ಪೊಲೀಸ್‌ ಸಿಬ್ಬಂದಿ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ‌ ಚರ್ಚೆಗೆ ಕಾರಣವಾಗಿದೆ.ಪೋಟೊಗಳು ಜಾಲತಾಣದಲ್ಲಿ ವೈರಲ್‌ ಆಗಿದ್ದು,ಪರ ಮತ್ತು ವಿರೋಧದ‌ ಅಭಿಪ್ರಾಯಗಳು ವ್ಯಕ್ತವಾಗಿವೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನ್ಮದಿನದ ಕಾರ್ಯಕ್ರಮದಲ್ಲಿ ಮುಧೋಳದ ಸಿಪಿಐ ಅಯ್ಯನಗೌಡ ಪಾಟೀಲ, ಪಿಎಸ್‌ಐ ಸಂಗಮೇಶ ಹೊಸಮನಿ ಹಾಗೂ ಲೋಕಾಪುರ ಪಿಎಸ್‌ಐ ಶಿವಶಂಕರ್ ಮುಕರಿ ಸಮವಸ್ತ್ರದಲ್ಲೇ ಭಾಗವಹಿಸಿ ಶುಭ ಕೋರಿದ್ದರು. ಈ ಫೋಟೊಗಳನ್ನು ಅರುಣ ಕಾರಜೋಳ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT