ADVERTISEMENT

ಆರ್‌ಎಸ್ಎಸ್, ಚಡ್ಡಿ ಕುರಿತ ಟೀಕೆ ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 10:00 IST
Last Updated 7 ಜೂನ್ 2022, 10:00 IST
ಯಡಿಯೂರಪ್ಪ
ಯಡಿಯೂರಪ್ಪ   

ಬಾಗಲಕೋಟೆ: ಆರ್‌ಎಸ್‌ಎಸ್ ಹಾಗೂ ಚಡ್ಡಿ ಬಗ್ಗೆ‌‌ ವಿಧಾನಸಭೆ ವಿರೋಧ ಪಕ್ಷದ‌ ನಾಯಕ ಸಿದ್ದರಾಮಯ್ಯ ಮಾಡಿರುವ ಟೀಕೆ‌ ಯಾರಿಗೂ ಶೋಭೆ‌ ತರುವಂತಹದಲ್ಲ ಎಂದು‌ ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿರೋಧ‌ ಪಕ್ಷದ‌ ನಾಯಕರಾಗಿ ಗೌರವದಿಂದ ನಡೆದುಕೊಳ್ಳುತ್ತಾರೆ ಎಂ‌ಬ ನಿರೀಕ್ಷೆ ಮಾಡಿದ್ವಿ. ಈಗ‌ ಅವರು ಮಾಡುತ್ತಿರುವ‌ ಟೀಕೆಯಿಂದ‌ ಅವರಿಗಿರುವ ಗೌರವವು ಹಾಳಾಗುತ್ತದೆ ಎಂದರು.

ಪಠ್ಯ ಪರಿಷ್ಕರಣೆಯಲ್ಲಿ ಲೋಪಗಳಾಗಿದ್ದರೆ, ಸರಿಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.