ADVERTISEMENT

ಹಿಂದುಳಿದವರು ಕಾಂಗ್ರೆಸ್‌ನ ಬೆನ್ನೆಲುಬು: ಎಸ್.ಆರ್. ಪಾಟೀಲ

ಕಾಂಗ್ರೆಸ್ ಹಿಂದುಳಿದ ವರ್ಗದವರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾಶಿನಾಥ ಹುಡೇದ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 16:41 IST
Last Updated 18 ಅಕ್ಟೋಬರ್ 2020, 16:41 IST
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗದವರ ವಿಭಾಗದ ನೂತನ ಅಧ್ಯಕ್ಷರಾಗಿ ಕಾಶಿನಾಥ ಹುಡೇದ ನಿಕಟಪೂರ್ವ ಅಧ್ಯಕ್ಷ ಡಾ.ದೇವರಾಜ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗದವರ ವಿಭಾಗದ ನೂತನ ಅಧ್ಯಕ್ಷರಾಗಿ ಕಾಶಿನಾಥ ಹುಡೇದ ನಿಕಟಪೂರ್ವ ಅಧ್ಯಕ್ಷ ಡಾ.ದೇವರಾಜ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು   

ಬಾಗಲಕೋಟೆ: ಹಿಂದುಳಿದ ವರ್ಗಗಳ ಜನರು ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಈ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೂ ಅಪಾರವಾಗಿದೆ. ರಾಜ್ಯದಲ್ಲಿ ಐದು ಜನ ಪಕ್ಷದ ನಾಯ ಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷ ಕಾಶಿನಾಥ ಹುಡೇದ, ಹಿಂದಿನ ಅಧ್ಯಕ್ಷ ಡಾ.ದೇವರಾಜ ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ದಯಾನಂದ ಪಾಟೀಲ ಮಾತನಾಡಿದರು.

ADVERTISEMENT

ಮಾಜಿ ಸಚಿವರಾದ ಎಚ್.ವೈ. ಮೇಟಿ, ಅಜಯಕುಮಾರ ಸರನಾಯಕ, ಮಾಜಿ ಶಾಸಕ ಜೆ.ಟಿ. ಪಾಟೀಲ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ವಾಸನದ, ಸೇವಾದಳ ಘಟಕದ ಅಧ್ಯಕ್ಷ ಎನ್.ಬಿ. ಗಸ್ತಿ, ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.