ADVERTISEMENT

ಕೋವಿಡ್ 19: ಜಿಲ್ಲೆಯಲ್ಲಿ ಮತ್ತಿಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 15:17 IST
Last Updated 6 ಜೂನ್ 2020, 15:17 IST

ಬಾಗಲಕೋಟೆ: ಬಾದಾಮಿ ತಾಲೂಕು ಢಾಣಕಶಿರೂರಿನ ಮಹಿಳೆ ಸೇರಿದಂತೆ ಇಬ್ಬರು ಕೋವಿಡ್–19 ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಶನಿವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಿಸಿದರು. ಆಸ್ಪತ್ರೆಯ ಸಿಬ್ಬಂದಿ ಗುಣಮುಖರಾದವರ ಕೈಗಳಿಗೆ ಸೀಲ್ ಹಾಕಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು. ಶನಿವಾರ ಜಿಲ್ಲೆಯಲ್ಲಿ ಕೋವಿಡ್–19 ಯಾವುದೇ ಪ್ರಕರಣ ದೃಢಪಟ್ಟಿಲ್ಲ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 91 ಪ್ರಕರಣ ದೃಢಪಟ್ಟಿವೆ. 75 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. 14 ಪ್ರಕರಣ ಸಕ್ರಿಯವಾಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.