ಬಾಗಲಕೋಟೆ: ತಾಲ್ಲೂಕಿನ ವೀರಾಪುರ ಗ್ರಾಮದ 47 ವರ್ಷದ ವ್ಯಕ್ತಿ ಶುಕ್ರವಾರ ತಡರಾತ್ರಿ ಕೋವಿಡ್-19 ಗೆ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮೂಲತಃ ಬಾಗಲಕೋಟೆ ಸಮೀಪದ ಸಿಕ್ಕೇರಿ ಗ್ರಾಮದವರಾದ ವ್ಯಕ್ತಿ ಕುಟುಂಬದೊಂದಿಗೆ ವೀರಾಪುರದಲ್ಲಿ ನೆಲೆಸಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಶುಕ್ರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಸಾವಿನ ನಂತರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿದೆ.
ಕೋವಿಡ್ ನಿಯಮಾವಳಿಯಂತೆ ನಸುಕಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ವೀರಾಪುರದಲ್ಲಿ ಆ ವ್ಯಕ್ತಿಯೊಂದಿಗೆ ಸಂಪಕ೯ದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು
ಬಾಗಲಕೋಟೆ ಡಿಎಚ್ಒ ಅನಂತ ದೇಸಾಯಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.