ಬಾಗಲಕೋಟೆ: ಜಿಲ್ಲೆಯಲ್ಲಿ 742 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಪ ವ್ಯವಸ್ಥೆ ಅಳವಡಿಸಲಾಗಿದೆ. ಇಲ್ಲಿಯವರೆಗೆ 23,026 ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಕೂಡಲೇ ಇ–ಕೆವೈಸಿ (ಬಯೋಮೆಟ್ರಿಕ್) ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ, ಇಳಕಲ್, ಗುಳೇದಗುಡ್ಡ ಮತ್ತು ರಬಕವಿ-ಬನಹಟ್ಟಿ ತಾಲ್ಲೂಕುಗಳಲ್ಲಿ 23,026 ಸದಸ್ಯರು ಬಾಕಿ ಇದ್ದಾರೆ.
2025 ಏ.30ರೊಳಗೆ ತಮ್ಮ ಸಂಬಂಧಿತ ನ್ಯಾಯಬೆಲೆ ಅಂಗಡಿಗೆ ತೆರಳಿ ಆಧಾರ್ ಆಧಾರಿತ ಇ-ಕೆವೈಸಿ (ಬಯೋಮೆಟ್ರಿಕ್) ಮಾಡಿಸಿಕೊಳ್ಳಬೇಕು. ಈ ಸೇವೆಗೆ ಯಾವುದೇ ಶುಲ್ಕವಿರುವುದಿಲ್ಲ. ಇ-ಕೆವೈಸಿ ಪ್ರಕ್ರಿಯೆ ಕೈಗೆತ್ತಿಕೊಳ್ಳದಿದ್ದಲ್ಲಿ, ಪಡಿತರ ಚೀಟಿಯಿಂದ ಹೆಸರು ತೆಗೆದುಹಾಕುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.