ADVERTISEMENT

ಬಾಗಲಕೋಟೆ | ಮತ್ತೆ ಕಲ್ಲು ತೂರಾಟ, ಲಘು ಲಾಠಿ ಪ್ರಹಾರ

ಬಿಗುವಿನ ವಾತಾವರಣೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 10:16 IST
Last Updated 20 ಫೆಬ್ರುವರಿ 2026, 10:16 IST
   

ಬಾಗಲಕೋಟೆ: ನಗರದ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಕಲ್ಲು ತೂರಾಟ ಮಾಡಲಾಗಿದೆ.

ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ಮತ್ತಿತರರ ಮುಖಂಡತ್ವದಲ್ಲಿ ಸಭೆ ನಡೆದಿತ್ತು.

ಸಭೆ‌ ಮುಗಿಸಿಕೊಂಡ ಯುವಕರ ದಂಡು ತರಕಾರಿ ಮಾರುಕಟ್ಟೆಯತ್ತ ಬಂದಿತು. ಆ ವೇಳೆ ಕಲ್ಲು ತೂರಾಟ ನಡೆದಿದೆ.

ADVERTISEMENT

ಕಲ್ಲು ತೂರಾಟ‌ ಮಾಡಿದ ಯುವಕರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಅಂಗಡಿಗಳು ಬಂದ್: ತರಕಾರಿ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂಗಡಿಗಳು ಬಂದ್ ಆಗಿದ್ದವು.

ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ತೆರಳುವ‌ ವೇಳೆ ಪಂಕಾ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಢ ಸಿದ್ದಾರ್ಥ ಗೋಯಲ್ ಅವರ ತಲೆಗೆ ಗಾಯವಾಗಿತ್ತು.

ಬಿಗುವಿನ ವಾತಾವರಣೆ: ನಗರದಲ್ಲಿ ಬಿಗುವಿನ ವಾತಾವರಣವಿದೆ. ಇಂದಿನಿಂದ ಫೆ.24ರವರೆಗೆ ನಿಷೇಧಾಜ್ಞೆ ವಿಧಿಸಿದ್ದರೂ, ಯುವಕರು ಗುಂಪಾಗಿ ತಿರುಗಾಡುತ್ತಿದ್ದಾರೆ.

ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆhttps://www.prajavani.net/district/bagalkot/stone-pelting-case-section-one-forty-four-imposed-in-bagalkote-3790123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.