ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರದಲ್ಲಿ ಭಾನುವಾರ ರಾತ್ರಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ನಡುರಸ್ತೆಯಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ಆಗಿದೆ.
ಮಾರ್ಗಮಧ್ಯೆ ಸ್ಥಳೀಯ ಮಹಿಳೆಯರು ಸೇರಿ ಗಭಿ೯ಣಿಗೆ ಹೆರಿಗೆ ಮಾಡಿಸಿದ್ದಾರೆ.
ಹೊಲದ ಮನೆಯಲ್ಲಿ ಇದ್ದ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ಪತಿ ಬೈಕ್ನಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ.
ಈ ವೇಳೆ ಹೆರಿಗೆ ನೋವು ಹೆಚ್ಚಿದ್ದು, ನಡುರಸ್ತೆಯಲ್ಲೇ ಹೆರಿಗೆ ಆಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತತ್ಕ್ಷಣ ಅಂಬುಲೆನ್ಸ್ಗೆ ಕರೆ ಮಾಡಿದ ಸ್ಥಳೀಯರು ಮಹಾಲಿಂಗಪುರದ ಆಸ್ಪತ್ರೆಗೆ ತಾಯಿ-ಮಗುವನ್ನು ಕರೆದೊಯ್ದು ದಾಖಲಿಸಿದ್ದಾರೆ.
ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.