
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಇಲ್ಲಿನ ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
‘ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬಾಲ ನ್ಯಾಯ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ’ ಎಂದು ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.