ADVERTISEMENT

ಬಾಗಲಕೋಟೆ: ಮಲಪ್ರಭಾದಲ್ಲಿ ಕೊಚ್ಚಿಕೊಂಡು ಹೋದ ರೈತ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 8:43 IST
Last Updated 7 ಸೆಪ್ಟೆಂಬರ್ 2022, 8:43 IST
   

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಮಾಳಗಾವಿ ರೈತರೊಬ್ಬರು ಬುಧವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ. ನದಿ ದಡದ ಹೊಲದಲ್ಲಿದ್ದ ಪಂಪ್ ಸೆಟ್ ಬಿಚ್ಚಿಕೊಂಡು ಬರಲು ಹೋಗಿದ್ದ ರೈತ ದೇವಾನಂದ (20) ನೀರಿನ ಸೆಳೆವಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ

ಧಾರವಾಡ ಜಿಲ್ಲೆಯಲ್ಲಿ ಮಳೆಯಾದ ಕಾರಣ ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ

ADVERTISEMENT

ರೈತನಿಗಾಗಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಹುಡುಕಾಟ ಆರಂಭಿಸಿದ್ದಾರೆ.

ತಾಲ್ಲೂಕಿನ ಕೆಂಗಲ್, ಕಜಗಲ್, ಹಾವನೂರು ಗ್ರಾಮಗಳಿಗೆ‌ ಮಲಪ್ರಭಾ ನದಿ ನೀರು ನುಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.