ADVERTISEMENT

ಬಾಗಲಕೋಟೆ: ಪೊಲೀಸ್‌ ವೇಷ ಧರಿಸಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 2:30 IST
Last Updated 6 ಜನವರಿ 2026, 2:30 IST
<div class="paragraphs"><p>ಪೊಲೀಸ್‌ (ಸಾಂಧರ್ಭಿಕ ಚಿತ್ರ)</p></div>

ಪೊಲೀಸ್‌ (ಸಾಂಧರ್ಭಿಕ ಚಿತ್ರ)

   

– ಪ್ರಜಾವಾಣಿ ಚಿತ್ರ

ಬಾಗಲಕೋಟೆ: ಪೊಲೀಸ್ ವೇಷ ಧರಿಸಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ನವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ನವನಗರ ಸೆಕ್ಟರ್‌ ನಂ.26ರ ನಿವಾಸಿ ಅರುಣ ಬಂಡಿವಡ್ಡರ್ ಬಂಧಿತ ಆರೋಪಿ. ಪೊಲೀಸ್ ಅಧಿಕಾರಿ ವೇಷ ಧರಿಸಿ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿ, ಅನಿಲ ಎಂಬುವವರನ್ನು ಬೆದರಿಸಿ ₹2 ಸಾವಿರ ಕಿತ್ತುಕೊಂಡು ಪರಾರಿಯಾಗಿದ್ದ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್‌ ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.