ಬಾದಾಮಿ: ಜ.28ರಂದು ನಡೆಯಬೇಕಿದ್ದ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್ ಕಾರಣದಿಂದರದ್ದುಪಡಿಸಲಾಗಿದ್ದು, ಬನಶಂಕರಿ ದೇವಿಯ ದರ್ಶನಕ್ಕೆ ಭಕ್ತರು ಬರದಂತೆ ಜ.31ರವರೆಗೆ ನಿರ್ಬಂಧ ವಿಧಿಸಲಾಗಿದೆ.
ದೇವಾಲಯದ ಮಹಾದ್ವಾರವನ್ನು ಬಂದ್ ಮಾಡಲಾಗಿದೆ. ಭಕ್ತರು ದೇವಾಲಯಕ್ಕೆ ಪ್ರವೇಶಿಸದಂತೆ ತಡೆಯಲು ಬಾದಾಮಿ ರಸ್ತೆ, ಗದಗ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.
‘ಜಿಲ್ಲಾಧಿಕಾರಿ ಆದೇಶದಂತೆ ಈ ವರ್ಷದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತರು ಪಾದಯಾತ್ರೆ ಮತ್ತು ವಾಹನಗಳ ಮೂಲಕ ಬನಶಂಕರಿಗೆ ಬರಬಾರದು. ಮನೆಯಲ್ಲಿಯೇ ದೇವಿಯನ್ನು ಆರಾಧಿಸಬೇಕು’ ಎಂದು ಪಿಎಸ್ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.