ಬಾಗಲಕೋಟೆ: ತಮ್ಮ 41ನೇ ಹುಟ್ಟುಹಬ್ಬದ ನಿಮಿತ್ತ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ರಕ್ತದಾನ ಮಾಡಿದರು.
ಬಾಗಲಕೋಟೆ ನಗರದ ಗೂರನವರ ಆಸ್ಪತ್ರೆಯಲ್ಲಿ ಸ್ವಾಮೀಜಿ ರಕ್ತದಾನ ಮಾಡಿದರು.
ಶ್ರೀಗಳ ಹುಟ್ಟುಹಬ್ಬ ಹಾಗೂ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಮೀಸಲಾತಿ ನೀಡಬೇಕು ಎಂಬ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ಪಂಚಮಸಾಲಿ ಸಮಾಜದ ಯುವ ಘಟಕ ರಕ್ತದಾನ ಶಿಬಿರ ಆಯೋಜಿಸಿದೆ.
ಸ್ವಾಮೀಜಿ ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಅವರ ಭಕ್ತರೂ ರಕ್ತದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.