ADVERTISEMENT

ಬಾಡಗಂಡಿ: ಅಪರಿಚಿತ ವಾಹನ ಹಾಯ್ದು ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 14:19 IST
Last Updated 26 ಡಿಸೆಂಬರ್ 2020, 14:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬಾಗಲಕೋಟೆ: ಬಸ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನ ಹಾಯ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಬೀಳಗಿ ತಾಲ್ಲೂಕಿನ ಬಾಡಗಂಡಿ ಬಳಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಬಬಲೇಶ್ವರ ಪಟ್ಟಣದ ನಿವಾಸಿ ಚಂದ್ರಕಾಂತ ಗೋಂದಳೆ (50) ಸಾವಿಗೀಡಾದವರು.

ADVERTISEMENT

ಬಬಲೇಶ್ವರದಿಂದ ಬೀಳಗಿಗೆ ಹೊರಟಿದ್ದ ಚಂದ್ರಕಾಂತ ಚಲಾಯಿಸುತ್ತಿದ್ದ ಬೈಕ್ ಎದುರಿಗೆ ಬಂದ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಉರುಳಿ ಬಿದ್ದ ಚಂದ್ರಕಾಂತ ಅವರ ಮೇಲೆ ಪಕ್ಕದಿಂದ ಹಾಯ್ದು ಹೋದ ವಾಹನ ಹರಿದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.

ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.