ADVERTISEMENT

ರಬಕವಿ ಬನಹಟ್ಟಿ | ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 4:25 IST
Last Updated 21 ಜುಲೈ 2025, 4:25 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ರಬಕವಿ ಬನಹಟ್ಟಿ: ತಾಲ್ಲೂಕಿನ ಬಂಡಿಗಣಿ ಗ್ರಾಮದ ಹತ್ತಿರ ಶನಿವಾರ ಮಧ್ಯಾಹ್ನ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ADVERTISEMENT

ಮೃತಪಟ್ಟ ವ್ಯಕ್ತಿಯನ್ನು ಸಮೀಪದ ಕುಲಹಳ್ಳಿ ಗ್ರಾಮದ ಮಲ್ಲಪ್ಪ ಹುನ್ನೂರು (63) ಎಂದು ಗುರುತಿಸಲಾಗಿದೆ.

ಬಂಡಿಗಣಿ ಕ್ರಾಸ್‌ನಿಂದ ತಮ್ಮ ತೋಟದ ಮನೆಗೆ ತೆರಳುವ ಸಂದರ್ಭದಲ್ಲಿ ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವಾಗ ಘಟನೆ ನಡೆದಿದೆ.

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಪಿಎಸ್ಐ ಶಾಂತಾ ಹಳ್ಳಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.