ಬಾಗಲಕೋಟೆ: ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನಾಗಿ ನಾಲ್ವರ ಹೆಸರನ್ನು ಇತ್ತೀಚಿಗೆ ಬಾದಾಮಿಯಲ್ಲಿ ನಡೆದ ಜಿಲ್ಲಾ ಕೋರ್ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಲಾಯಿತು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಟಿ.ಪಾಟೀಲ ತಿಳಿಸಿದ್ದಾರೆ.
ನೇಕಾರ ಸಹಕಾರಿ ಸಂಘದಿಂದ ಮಲ್ಲಿಕಾರ್ಜುನ ಬಣಕಾರ, ಕುರಿ ಹಾಗೂ ಉಣ್ಣೆ ಸಹಕಾರಿ ಸಂಘದಿಂದ ಸದಾಶಿವ ಇಟಕನ್ನವರ, ಇತರೆ ಸಹಕಾರಿ ಸಂಘದಿಂದ ಹನಮಂತ ನಿರಾಣಿ, ಪತ್ತಿನ ಸಹಕಾರಿ ಸಂಘ ಹಾಗೂ ಬ್ಯಾಂಕ್ಗಳಿಂದ ಪ್ರಕಾಶ ತಪಶೆಟ್ಟಿ ಅವರನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.