ಬಾಗಲಕೋಟೆ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ತಾಲ್ಲೂಕಿನ ಕಲಾದಗಿಯಲ್ಲಿ ಸಾಮೂಹಿಕ ಪ್ರಾಥ೯ನೆಗೆ ಮುಂದಾಗಿದ್ದ 16 ಜನರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ.
ಎಲ್ಲರೂ ಕಲಾದಗಿ ಗ್ರಾಮದ ಪೆಂಡಾರ ಗಲ್ಲಿಯ ಹಾಲ್ ನಲ್ಲಿ ಸಾಮೂಹಿಕ ಪ್ರಾಥ೯ನೆಗೆ ಮುಂದಾಗಿದ್ದರು.
ಖಚಿತ ಮಾಹಿತಿಯ ಪಿ.ಎಸ್.ಐ. ರವಿ ಪವಾರ್ ನೇತೃತ್ವದ ತಂಡ ದಾಳಿ ನಡೆಸಿ ಬಂಧಿಸಿದೆ.
ಕಲಾದಗಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.