ಜಮಖಂಡಿ: ‘ಸಮಗ್ರ ಜಾತಿ ಸಮೀಕ್ಷೆಗಾಗಿ ಗಣತಿದಾರರು ಪ್ರತಿ ಕುಟುಂಬಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ, ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಕುಟುಂಬದ ಸಮಗ್ರ ಸಮೀಕ್ಷೆ ನಡೆಸುವಂತೆ ಜವಾಬ್ದಾರಿ ನೀಡಲಾಗಿದೆ’ ಎಂದು ಜಮಖಂಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೇವ ಪಾಸೋಡಿ ಹೇಳಿದರು.
ತಾಲ್ಲೂಕಿನ ಕೊಣ್ಣೂರ, ಕವಟಗಿ, ಚಿಕ್ಕಪಡಸಲಗಿ, ಆಲಗೂರ, ಸೇರಿದಂತೆ ವಿವಿಧೆಡೆ ಪರಿಶಿಷ್ಟ ಜಾತಿಯ ಒಳಪಂಗಡಗಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯನ್ನು ಶಿಕ್ಷಕರು ನಡೆಸುತ್ತಿದ್ದು, ಮತಗಟ್ಟೆಗಳಿಗೆ ಭೇಟಿ ನೀಡಿ ಶಿಕ್ಷಕರಿಂದ ಮಾಹಿತಿ ಪಡೆದರು.
ಶಿಕ್ಷಕ ಶ್ರೀಶೈಲ ಟಿ.ಗಸ್ತಿ ಹಾಗೂ ಗಣತಿದಾರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.