ಬಾಗಲಕೋಟೆ: ರಾಜ್ಯ ವಿಶ್ವ ವಿದ್ಯಾಲಯಗಳ ಹಾಗೂ ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಇಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಹಾಗೂ ಅಲ್ಲಿನ ಬೆಂಗಳೂರಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಜಿ.ಭಾಸ್ಕರ್ ಗೆಲುವು ಸಾಧಿಸಿದರು.
ಪ್ರತಿಸ್ಪರ್ಧಿ ಡಾ.ಟಿ.ಎಂ.ಮಂಜುನಾಥ ಅವರಿಗಿಂತ ಎರಡು ಮತ ಹೆಚ್ಚು ಪಡೆದ ಭಾಸ್ಕರ್ ವಿಜಯದ ನಗೆ ಬೀರಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ರಾಯಚೂರು ಜಿಲ್ಲೆ ಲಿಂಗಸೂರಿನ ಡಾ.ಚಂದ್ರಶೇಖರ ಪಾಟೀಲ ಆಯ್ಕೆಯಾದರು. ಪ್ರತಿ ಸ್ಪರ್ಧಿ ಡಾ.ಸಿ.ಆರ್.ರಾಜು ವಿರುದ್ಧ 13 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಖಜಾಂಚಿ ಸ್ಥಾನಕ್ಕೆ ಬೆಳಗಾವಿ ಜಿಲ್ಲೆ ಕೆಎಲ್ಇ ಶಿಕ್ಷಣ ಸಂಸ್ಥೆ ಕಾಲೇಜಿನ ಡಾ.ಎಂ.ಬಿ.ಹೆಗ್ಗಣ್ಣವರ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿನ ಬಿ.ವಿ.ವಿ ಸಂಘದ ಸಭಾಂಗಣದಲ್ಲಿ ಒಕ್ಕೂಟದ ಸರ್ವಸಾಧಾರಣಾ ಸಭೆ, ಶೈಕ್ಷಣಿಕ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.