ಬಾದಾಮಿ: ಸಮೀಪದ ಹೊಸೂರಿನಲ್ಲಿಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಮನೆಗೆ ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹1 ಲಕ್ಷ ಪರಿಹಾರ ನೀಡಿದರು.
ನಂತರ ಕೋವಿಡ್–19 ಹರಡುವಿಕೆ ಕಾರಣ ಸೀಲ್ ಡೌನ್ ಆಗಿದ್ದ ಢಾಣಶಿರೂರ ಗ್ರಾಮದ ಚೆಕ್ಪೋಸ್ಟ್ಗೆ ತೆರಳಿ ಗ್ರಾಮಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು.
ನಂದಿಕೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದ ₹5 ಲಕ್ಷ ಪರಿಹಾರ ಮೊತ್ತದ ಚೆಕ್ ಮತ್ತು ವೈಯಕ್ತಿಕವಾಗಿ ₹1 ಲಕ್ಷ ವಿತರಿಸಿದರು.ಅಪಘಾತದಲ್ಲಿ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡಿದರು.
ಕೊರೊನಾ ಕರ್ತವ್ಯದಲ್ಲಿ ಇದ್ದ ವೇಳೆ ಮೃತಪಟ್ಟ ಅಂಗನವಾಡಿ ಶಿಕ್ಷಕಿಯ ಕುಟುಂಬಕ್ಕೆ ಸರ್ಕಾರದಿಂದ ₹ 30 ಲಕ್ಷ ವಿಮಾ ಮೊತ್ತ ನೀಡುವಂತೆ ಆರೋಗ್ಯ ಸಚಿವರಿಗೆ ಒತ್ತಾಯಿಸಿದ್ದೇನೆ ಎಂದರು. ಈಚೆಗೆ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತನ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.