ADVERTISEMENT

ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 11:38 IST
Last Updated 27 ಸೆಪ್ಟೆಂಬರ್ 2022, 11:38 IST
ಮುಧೋಳದಲ್ಲಿ ಸಚಿವ ‌ಮುರುಗೇಶ ನಿರಾಣಿ ಅವರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ
ಮುಧೋಳದಲ್ಲಿ ಸಚಿವ ‌ಮುರುಗೇಶ ನಿರಾಣಿ ಅವರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ   

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು.

ಇದಕ್ಕೂ ಮುನ್ನ ಜಮಖಂಡಿಯಲ್ಲಿ‌ ನಡೆದ ಸಿದ್ದು ನ್ಯಾಮಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಇಬ್ಬರೂ ಪಾಲ್ಗೊಂಡಿದ್ದರು. ಸಂಗಮೇಶ ಅವರು ಅರ್ಧದಲ್ಲಿಯೇ ಕಾರ್ಯಕ್ರಮದಿಂದ ಎದ್ದು ಬಂದಿದ್ದರು.

ADVERTISEMENT

2018 ರಲ್ಲಿ ಜಮಖಂಡಿಯಿಂದ ಬಿಜೆಪಿ ಟಿಕೆಟ್ ದೊರೆಯದ ಕಾರಣ ಸಂಗಮೇಶ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ಬಾರಿಯೂ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗಬಹುದೇ ಎಂಬ ಚರ್ಚೆಗೆ ಭೇಟಿ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.