ADVERTISEMENT

ದೆಹಲಿಯಿಂದ ಮರಳಿದ್ದ ವ್ಯಕ್ತಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರೆಂಟೈನ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 6:16 IST
Last Updated 1 ಏಪ್ರಿಲ್ 2020, 6:16 IST

ಬಾಗಲಕೋಟೆ: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಗ್ ಜಮಾತ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಗರದ ಒಬ್ಬ ವ್ಯಕ್ತಿಯನ್ನು ಬುಧವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ನಲ್ಲಿ ನಿಗಾದಲ್ಲಿ ಇಡಲಾಗಿದೆ.

ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಆದರೂ ಮುಂಜಾಗರೂಕತಾ ಕ್ರಮವಾಗಿ ಕ್ವಾರೆಂಟೈನ್ ಗೆ ಒಳಪಡಿಸಿದ್ದೇವೆ. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಆ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದವರ ಮೇಲೂ ನಿಗಾ ಇಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ತಿಳಿಸಿದರು.

ದೆಹಲಿಯಲ್ಲಿ ಧಾರ್ಮಿಕ ಸಮಾವೇಶದಲ್ಲಿ ಜಿಲ್ಲೆಯ ಇನ್ನಷ್ಟು ಮಂದಿ ಭಾಗವಹಿಸಿರುವ ಮಾಹಿತಿ ಇದೆ. ಅವರ ಪತ್ತೆ ಕಾರ್ಯ ನಡೆದಿದೆ. ದೆಹಲಿಗೆ ಹೋಗಿ ಬಂದವರು ತಕ್ಷಣ ತಹಶೀಲ್ದಾರ ಕಚೇರಿಗೆ ತೆರಳಿ ಮಾಹಿತಿ ನೀಡುವಂತೆ ಜಿಲ್ಲಾ ವಕ್ಫ್ ಸಮಿತಿ ಮೂಲಕ ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ ಎಂದರು.

ADVERTISEMENT

ಮುಧೋಳದ ಆರು ಮಂದಿ, ಬಾಗಲಕೋಟೆ ತಾಲ್ಲೂಕಿನ ಕಲಾದಗಿಯ ಇಬ್ಬರು ಸೇರಿದಂತೆ ಜಿಲ್ಲೆಯಿಂದ 16 ಜನರು ದೆಹಲಿಯ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಇದೆ. ಅವರನ್ನು ಸಂಪರ್ಕಿಸುವ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.