ADVERTISEMENT

ಕೋವಿಡ್–19: ಮತ್ತಿಬ್ಬರು ಗುಣಮುಖ

ಜಿಲ್ಲೆಯಲ್ಲಿ ಇಲ್ಲಿಯವರೆಗೆ 71 ಮಂದಿ ಗುಣಮುಖ: ಏಳು ಪ್ರಕರಣ ಸಕ್ರಿಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 11:17 IST
Last Updated 2 ಜೂನ್ 2020, 11:17 IST

ಬಾಗಲಕೋಟೆ: ಕೋವಿಡ್–19 ಸೋಂಕಿನಿಂದ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗುಣಮುಖರಾಗಿ ಮಂಗಳವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 79 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದು, ಈಗ ಏಳು ಸಕ್ರಿಯ ಪ್ರಕರಣ ಉಳಿದಂತಾಗಿದೆ.

ಬಾದಾಮಿ ತಾಲ್ಲೂಕಿನ ಢಾಣಕಶಿರೂರಿನ 50 ವರ್ಷದ ವ್ಯಕ್ತಿ ಹಾಗೂ ಬಾಗಲಕೋಟೆ ನಗರದ 28 ವರ್ಷದ ಯುವಕ ಸೋಂಕಿನಿಂದ ಗುಣಮುಖರಾದವರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಇಬ್ಬರಿಗೂ ಪ್ರಮಾಣಪತ್ರ ವಿತರಿಸಿದರು. ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.