ADVERTISEMENT

ಸಕ್ಕರೆ ಕಾರ್ಖಾನೆ ಬಂದ್, ಸಾಲದ ಬಾಧೆ: ದಿನಗೂಲಿ ನೌಕರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 5:07 IST
Last Updated 16 ನವೆಂಬರ್ 2021, 5:07 IST

ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಂದ್ ಆಗಿದ್ದರಿಂದ ನೊಂದ ದಿನಗೂಲಿ ನೌಕರ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಧೋಳ ತಾಲ್ಲೂಕಿನ ಗುಲಗಾಲ ಜಂಬಗಿಯ ಹನಮಂತ (32) ಆತ್ಮಹತ್ಯೆ ಮಾಡಿಕೊಂಡವರು.

ಅವರು ಮುಧೋಳ ತಾಲ್ಲೂಕಿನ ತಿಮ್ಮಾಪುರದ ರನ್ನ ಸಹಕಾರಿ ಸಕ್ಕರೆ ಕಾಖಾ೯ನೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದರು.

ADVERTISEMENT

ಕಳೆದ ಎರಡು ವಷ೯ಗಳಿಂದ ಕಾಖಾ೯ನೆ ಬಂದ್ ಆಗಿದೆ.

ಹನಮಂತ ಬ್ಯಾಂಕ್ ಹಾಗೂ ಖಾಸಗಿಯಾಗಿ ₹2.88 ಲಕ್ಷ ಸಾಲ ಮಾಡಿದ್ದರು. ಈಗ ಸಾಲ ಮರಳಿಸಬೇಕಾದ ಒತ್ತಡ ಹಾಗೂ ಕಾರ್ಖಾನೆ ಪುನರ್ ಆರಂಭವಾಗದ ಕಾರಣ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ತಮ್ಮದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.