ಬಾದಾಮಿ: ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದಶಾಸಕ ಸಿದ್ದರಾಮಯ್ಯ ಬಗ್ಗೆ ಫೇಸ್ಬುಕ್ನಲ್ಲಿ ಅಸಭ್ಯವಾಗಿ ಸಂದೇಶ ಹಾಕಿದ ಯುವಕನನ್ನು ಬಾದಾಮಿ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಖ್ಯಾಡ ಗ್ರಾಮದ ಸಂಗಪ್ಪ ಸಿದ್ರಾಮಣ್ಣವರ ಬಂಧಿತ ಯುವಕ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಮಹಿಳೆಯೊಬ್ಬರು ವೇದಿಕೆಯಲ್ಲಿ ಕೆನ್ನೆಗೆ ಮುತ್ತಿಟ್ಟ ಚಿತ್ರವನ್ನು ಬಳಸಿಕೊಂಡು ಅಸಭ್ಯ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಲಾಗಿದೆ ಎಂದು ಪಿಎಸ್ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.