ADVERTISEMENT

ಎರಡು ಕೋಮಿನ ನಡುವೆ ಗಲಾಟೆ: ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 15:32 IST
Last Updated 6 ಜುಲೈ 2022, 15:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರು ಬಸ್‌ ನಿಲ್ದಾಣದಲ್ಲಿ ಬುಧವಾರ ಸಂಜೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಮೂವರಿಗೆ ಗಾಯಗಳಾಗಿವೆ.

ಗಲಾಟೆಯಲ್ಲಿ ಅರುಣ್, ಲಕ್ಷ್ಮಣ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆಯಲ್ಲಿ ಯಮನೂರ ಎಂಬುವವರು ಗಾಯಗೊಂಡಿದ್ದಾರೆ. ಅರುಣ, ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿಯಾಗಿದ್ದಾರೆ. ಗಾಯಾಳು ಅರುಣ್ ಅವರನ್ನು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ವಿಷಯ ತಿಳಿಯುತ್ತಿದ್ದಂತೆಯೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್‌ವೊಂದಕ್ಕೆ ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ADVERTISEMENT

ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್‌ ಒದಗಿಸಲಾಗಿದೆ ಎಂದು ಕೆರೂರು ಪ್ರಭಾರಿ ಪಿಎಸ್‌ಐ ವೈ.ಎಸ್. ಪಠಾಣ ‘ಪ್ರಜಾವಾಣಿ‘ಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ, ಸಿಪಿಐ ಭೀಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.