ಬಾಗಲಕೋಟೆ: ಕಳೆದೊಂದು ವಾರದಿಂದ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಬೆಳಗಾವಿ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆಗೆ ₹ 550 ಕೋಟಿ ಹಾನಿಯಾಗಿದೆ. ಇಲಾಖೆಗೆ ಸಂಬಂಧಿಸಿದಂತೆ ಹಾನಿಯಾಗಿರುವ ಕಟ್ಟಡ, ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿಗೆ ತಕ್ಷಣ ₹ 50 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಮುಧೋಳ ತಾಲ್ಲೂಕಿನ ಮಿರ್ಜಿಯಲ್ಲಿ ಶನಿವಾರ ಘಟಪ್ರಭಾ ನದಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.