ಬಾದಾಮಿ: ಶಿವಯೋಗಮಂದಿರ ಸಮೀಪದ ಮಲಪ್ರಭಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ನಂದಿನಿ ಮಾವನಮರದ (12) ಶವ ಸೋಮವಾರ ಪತ್ತೆಯಾಗಿದೆ ಎಂದು ಪಿಎಸ್ಐ ನೇತ್ರಾವತಿ ಪಾಟೀಲ ತಿಳಿಸಿದರು.
ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರ ನೆರವಿನಿಂದ ಶಿವಯೋಗಮಂದಿರದಿಂದ ಒಂದೂವರೆ ಕಿ.ಮೀ. ದೂರದಲ್ಲಿ ಶವ ಪತ್ತೆ ಮಾಡಿದ್ದಾರೆ. ಶಿವಯೋಗಮಂದಿರ ಸಮೀಪ ಮಲಪ್ರಭಾ ನದಿಯಲ್ಲಿ ಭಾನುವಾರ ಕೈತೊಳೆಯಲು ಹೋದಾಗ ಮೂವರು ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಶವ ಪತ್ತೆಯಾಗಿತ್ತು. ಇಂದು ಬಾಲಕಿ ಶವ ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.