ADVERTISEMENT

ಆತ್ಮಾವಲೋಕನ ಮಾಡಿಕೊಳ್ಳಿ: ಬಿಜೆಪಿ ಸರ್ಕಾರ ಬರಲು ಕಾರಣರಾದವರ ಬಗ್ಗೆ ಎಚ್ಡಿಕೆ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 18:52 IST
Last Updated 23 ಜನವರಿ 2023, 18:52 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬಾಗಲಕೋಟೆ: ‘ಬಿಜೆಪಿ ಸರ್ಕಾರದ‌‌ ದುರಾಡಳಿತವನ್ನು ಕಾಂಗ್ರೆಸ್ ನಾಯಕರು ಟೀಕೆ‌ ಮಾಡುತ್ತಿದ್ದಾರೆ. ಆದರೆ, ಇಂತಹ ಸರ್ಕಾರ‌ ಬರಲು ಕಾರಣರಾದವರು ‌ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ‌ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗುಳೇದಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ‘ಸರ್ಕಾರ ರಚನೆಗೆ ಸಹಕರಿಸಿ, ಈಗ‌ ಟೀಕೆ ಮಾಡಿಕೊಂಡು ತಿರುಗಾಡುತ್ತಿದ್ದಾರೆ‌’ ಎಂದು ಲೇವಡಿ ಮಾಡಿದರು.

‘ಸಚಿವ ಮಾಧುಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕುಟುಂಬದವರೆಲ್ಲ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಾರು ಲೂಟಿ ಮಾಡುತ್ತಿ ದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಜನ‌ ತೀರ್ಮಾನ ಮಾಡಲಿದ್ದಾರೆ’ ಎಂದರು.

ADVERTISEMENT

‘ದೇವೇಗೌಡ್ರು ಹೇಮಾವತಿ ಜಲಾಶಯ ಕಟ್ಟದಿದ್ದರೆ ಏನಾಗುತ್ತಿತ್ತು? ಜಲಾಶಯ ಇರದಿದ್ದರೆ ಇವರೆಲ್ಲಿಂದ ನೀರು ತರುತ್ತಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.