ADVERTISEMENT

ಕೆರೂರ: ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 16:24 IST
Last Updated 28 ಏಪ್ರಿಲ್ 2022, 16:24 IST
ಕೆರೂರ ಸಮೀಪದ ಯಂಡಿಗೇರಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿನ ತೆಂಗಿನಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿಯಿತು
ಕೆರೂರ ಸಮೀಪದ ಯಂಡಿಗೇರಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿನ ತೆಂಗಿನಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿಯಿತು   

ಕೆರೂರ: ಪಟ್ಟಣದಲ್ಲಿ ಗುರುವಾರ ಸಂಜೆ ಭಾರಿ ಬಿರುಗಾಳಿ, ಆಲಿಕಲ್ಲು ಮಳೆಯೊಂದಿಗೆ ಧಾರಾಕಾರವಾಗಿ ಮಳೆ ಸುರಿದೆ. ಗಾಳಿ ಸಹಿತ ಮಳೆ ಸುರಿದ ಪರಿಣಾಮ ಕೆಲವಡೆಡೆ ಮರಗಳು ಧರೆಗೆ ಉರುಳಿವೆ. ವಿದ್ಯುತ ತಂತಿ‌ ಮರದ ಕೊಂಬೆಗಳು ಬಿದ್ದ ಕಾರಣ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ಇಡೀ ಪಟ್ಟಣ ಕತ್ತಲೆಯಲ್ಲಿ ಮುಳುಗಿತ್ತು.

ಸಂಜೆ 4.30 ರ ಸುಮಾರಿಗೆ ಭಾರೀ ಗುಡುಗು, ಸಿಡಿಲ ಆರ್ಭಟದೊಂದಿಗೆ ಬೀಸಿದ ಬಿರುಗಾಳಿಗೆ ಸ್ಥಳಿಯ ಎಪಿಎಂಸಿ ಆವ ರಣದಲ್ಲಿನ ಅನೇಕ ಅಂಗಡಿಗಳ ಚಾವಣಿ ಪತ್ರಾಸಗಳು ಹಾರಿ ಹೋಗಿವೆ. ಹತ್ತಾರು ಒತ್ತು ಗಾಡಿ, ಕೆಲವು ಚಹಾ ದ ಹೋಟೆಲಗಳು ಕುಸಿದಿವೆ. ಬಹುತೇಕ ರಸ್ತೆಗಳು ಜಲಾವೃತ ಗೊಂಡವು. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಕಾರಣ ನಿವಾಸಿಗಳು ತೊಂದರೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT