ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.