ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.