ಬಾಗಲಕೋಟೆ: ಮಲಪ್ರಭಾ ನದಿಗೆ ನವಿಲುತೀರ್ಥ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ- ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ನಡುವಿನ ಹೊಸ ಸೇತುವೆ ಜಲಾವೃತವಾಗಿದ್ದು, ಹುಬ್ಬಳ್ಳಿ-ಸೊಲ್ಲಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸೋಮವಾರ ಬೆಳಿಗ್ಗೆಯಿಂದ ಸಂಚಾರ ಸ್ಥಗಿತಗೊಂಡಿದೆ.
ಕಳೆದ ಮೂರು ವರ್ಷಗಳಿಂದ ಮಲಪ್ರಭೆಗೆ ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಟ್ಟಾಗಲೆಲ್ಲಾಹೊಸ ಸೇತುವೆ ಜಲಾವೃತವಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳುತ್ತಿದೆ.
ಈ ಹೆದ್ದಾರಿ ಹುಬ್ಬಳ್ಳಿಯಿಂದ ಸೊಲ್ಲಾಪುರ ಮಾರ್ಗವಾಗಿ ಉತ್ತರ ಭಾರತದ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ಸರಕು ಸಾಗಣೆಯ ಪ್ರಮುಖ ಹಾದಿಯಾಗಿದೆ.
ವಾಹನಗಳು ರಾಮದುರ್ಗ, ಧಾರವಾಡ ಮೂಲಕ ಇಲ್ಲವೇ ಬಾದಾಮಿ, ರೋಣ ನವಲಗುಂದ ಮಾರ್ಗವಾಗಿ ಹುಬ್ಬಳ್ಳಿಗೆ ತಲುಪಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.