ADVERTISEMENT

ಅಂಬೇಡ್ಕರ್ ಚಿತ್ರಕ್ಕೆ ಸೆಗಣಿ ಬಳಿದ ಕಿಡಿಗೇಡಿಗಳು: ಹಂಗರಗಿ ಪ್ರಕ್ಷುಬ್ಧ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 22:33 IST
Last Updated 4 ಸೆಪ್ಟೆಂಬರ್ 2022, 22:33 IST
ಗುಳೇದಗುಡ್ಡ ತಾಲ್ಲೂಕಿನ ಹಂಗರಗಿ ಗ್ರಾಮದ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಗೋಡೆ ಮೇಲೆ ಚಿತ್ರಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಭಾನುವಾರ ಕಿಡಿಗೇಡಿಗಳು ಸೆಗಣಿ ಎರಚಿರುವುದು
ಗುಳೇದಗುಡ್ಡ ತಾಲ್ಲೂಕಿನ ಹಂಗರಗಿ ಗ್ರಾಮದ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಗೋಡೆ ಮೇಲೆ ಚಿತ್ರಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಭಾನುವಾರ ಕಿಡಿಗೇಡಿಗಳು ಸೆಗಣಿ ಎರಚಿರುವುದು   

ಗುಳೇದಗುಡ್ಡ (ಬಾಗಲಕೋಟೆ ಜಿಲ್ಲೆ): ತಾಲ್ಲೂಕಿನ ಹಂಗರಗಿ ಗ್ರಾಮದ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆಯ ಮೇಲೆ ಚಿತ್ರಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಭಾನುವಾರ ಕಿಡಿಗೇಡಿಗಳು ಸೆಗಣಿ ಬಳಿದಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.

ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದರು. ಕೆರೂರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಾದಾಮಿ ಸಿಪಿಐ ಕರೆಪ್ಪ ಬನ್ನೆ ಅವರು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದರು.

ಗ್ರಾಮದಲ್ಲಿ ಐದನೇ ದಿನದ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮವೂ ಇದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.