ADVERTISEMENT

ಹಿಂದೂಗಳ ವಿರುದ್ಧ ಅಸಹನೆ: ಪೇಜಾವರ ಶ್ರೀ ಬೇಸರ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 4:35 IST
Last Updated 30 ನವೆಂಬರ್ 2021, 4:35 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ   

ಬಾಗಲಕೋಟೆ: ‘ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ (ಹಿಂದೂಗಳ) ಸಹನೆಯ ದೌರ್ಭಾಗ್ಯ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.‘ಬಿಜೆಪಿ ಸರ್ಕಾರ ಇರುವ ಹಿನ್ನೆಲೆಯಲ್ಲಿಯೇ ವಿರೋಧ ನಡೆಯುತ್ತಿದೆ. ಇದಕ್ಕೆ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಕಡಿವಾಣ ಹಾಕಬೇಕು. ಹಾಗೆಂದು ಜನರ ವಿರೋಧಗಳನ್ನು ನೇರವಾಗಿ ಕಾನೂನು ಮೂಲಕ ಹತ್ತಿಕ್ಕುವುದು ಸರಿಯಲ್ಲ‘ ಎಂದು ಹೇಳಿದರು.

‘ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲ’ ಎಂಬ ಮಾಧ್ಯಮದವರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.