ADVERTISEMENT

ಬಾಗಲಕೋಟೆ: ಗುಳೇದಗುಡ್ಡದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 9:26 IST
Last Updated 23 ಜನವರಿ 2023, 9:26 IST
ಜೆಡಿಎಸ್ ಪಂಚರತ್ನ ಯಾತ್ರೆ
ಜೆಡಿಎಸ್ ಪಂಚರತ್ನ ಯಾತ್ರೆ    

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡದಲ್ಲಿ ಸೋಮವಾರ ಜೆಡಿಎಸ್ ನ ಪಂಚರತ್ನ ಯಾತ್ರೆ ಅದ್ಧೂರಿಯಾಗಿ ನಡೆಯಿತು.

ಎಚ್.ಡಿ. ಕುಮಾರಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು. ಅವರಿಗೆ ಗುಳೇದಗುಡ್ಡ ಖಣದಲ್ಲಿ ಸಿದ್ಧಪಡಿಸಲಾದ ಹಾರ ಹಾಕಲಾಯಿತು.

ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ ಸರ್ಕಾರ‌ ರಚನೆಯಾಗಲಿದೆ. ಬಾದಾಮಿ ಕ್ಷೇತ್ರದಿಂದ ಜೆಡಿಸ್ ಅಭ್ಯರ್ಥಿ ಹನುಮಂತ ಮಾವಿನಮರದ‌ ಅವರನ್ನು ಗೆಲ್ಲಿಸಿ ಕಳುಹಿಸಿರಿ. ಸಚಿವರನ್ನಾಗಿ ಮಾಡುವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.