ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಐವರು ಕಲಾವಿದರಿಗೆ ಗೌರವ ಪ್ರಶಸ್ತಿ, 10 ಕಲಾವಿದರಿಗೆ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ.
ಗೌರವ ಪ್ರಶಸ್ತಿ ತಲಾ ₹50 ಸಾವಿರ, ವಾರ್ಷಿಕ ಪ್ರಶಸ್ತಿ ತಲಾ ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಏಪ್ರಿಲ್ ಮೊದಲ ವಾರ ಬಾಗಲಕೋಟೆಯಲ್ಲಿ ನಡೆಯಲಿದೆ ಎಂದುಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್.ಹೇಮಾವತಿ ಅವರು ತಿಳಿಸಿದ್ದಾರೆ.
ಗೌರವ ಪ್ರಶಸ್ತಿ ಪುರಸ್ಕೃತರು: ಮಂಡ್ಯ ಜಿಲ್ಲೆ ದೊಡ್ಡಬೋಗನಹಳ್ಳಿಯ ನಾಗಮ್ಮ ಕೃಷ್ಣಯ್ಯ (ಗೊಂಬೆಯಾಟ), ಬಾಗಲಕೋಟೆ ಜಿಲ್ಲೆಯ ಶಿರೂರಿನ ಶಾಂತಪ್ಪ ಬಾಡದ (ದೊಡ್ಡಾಟ), ಕೊಪ್ಪಳ ಜಿಲ್ಲೆ ಅಳವಂಡಿ ಗ್ರಾಮದ ಹನುಮಂತಪ್ಪ ಎಲಿಗಾರ (ಸಣ್ಣಾಟ), ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಇಂಗಳಗಿಯ ಎಂ.ಎಸ್.ಮಾಳವಾಡ (ದೊಡ್ಡಾಟ), ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ ಡಿ.ಬಿ.ಶಿವಣ್ಣ.
ವಾರ್ಷಿಕ ಪ್ರಶಸ್ತಿ ಪುರಸ್ಕೃತರು: ಬೀದರ್ ಜಿಲ್ಲೆ ಔರಾದ ತಾಲ್ಲೂಕಿನ ಜಿಗರಾರ ಗ್ರಾಮದ ರಾಮಶೆಟ್ಟಿ ಬಂಬುಳಗೆ (ದೊಡ್ಡಾಟ), ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಚಿಕ್ಕಲದಿನ್ನಿಯ ನಾಗಪ್ಪ ಸೂರ್ಯವಂಶಿ (ಸಣ್ಣಾಟ), ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪೂರದ ದುರಗವ್ವ (ಪಾರಿಜಾತ), ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಗುಂಡಣ್ಣನವರ ಓಣಿ ಕಬನೂರಿನ ರಾಮಪ್ಪ ಕುರಬರ (ದೊಡ್ಡಾಟ), ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಕೆರೆ ಮಾಸ್ತಿಹೊಳೆಯ ನಿಂಗನಗೌಡ ಪಾಟೀಲ (ಸಣ್ಣಾಟ).
ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಕೊಂಕಣಗಾಂವ ಗ್ರಾಮದ ರೇವಗೊಂಡ ಬಿರಾದಾರ (ಬಯಲಾಟ), ಬಳ್ಳಾರಿ ತಾಲ್ಲೂಕು ಎಮ್ಮಿಗನೂರಿನ ಕೆ.ಹೇಮಾರಡ್ಡಿ (ಬಯಲಾಟ), ಬೆಂಗಳೂರು ನಗರದ ಡಾ.ಟಿ.ಗೋವಿಂದರಾಜು (ತೊಗಲು ಗೊಂಬೆ), ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ಯಲ್ಲಾಲಿಂಗ ನಗರದ ಜಿ.ವೀರನಗೌಡ ಚಂದ್ರಪ್ಪ(ದೊಡ್ಡಾಟ), ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಚಮಕೇರಿಯ ಶಿವಪ್ಪ ಕುಂಬಾರ (ಪಾರಿಜಾತ).
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.