ADVERTISEMENT

ಸಿಎಂ ಕುರ್ಚಿ ಖಾಲಿ ಇಲ್ಲ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 12:44 IST
Last Updated 24 ಜುಲೈ 2021, 12:44 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬಾಗಲಕೋಟೆ: ಮಾಧ್ಯಮಗಳಲ್ಲಿ ವರದಿಯಾದಂತೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ಣಯ ಆಗಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಹ, ಕೊರೊನಾ ಸಂಕಷ್ಟದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದಾರೆ. ಪ್ರವಾಹ ಸ್ಥಿತಿ ವೀಕ್ಷಣೆಗೆ ಭಾನುವಾರ ಬೆಳಗಾವಿಗೆ ಬರುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗಂತೂ ಏನೂ ಗೊತ್ತಿಲ್ಲ ಎಂದು ಹೇಳಿದರು.

ADVERTISEMENT

ಸಿಎಂ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿ ಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, 'ಕುರ್ಚಿ ಖಾಲಿ ಇದ್ದಾಗ ಹೆಸರು ಕೇಳಿ ಬರಬೇಕು. ಖಾಲಿ ಇಲ್ಲವಲ್ಲ' ಎಂದು ನಸುನಕ್ಕರು.

ಇವನ್ನೂ ಓದಿ
*

*
*
*
*
*
*
*
*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.