ADVERTISEMENT

ಬಾಗಲಕೋಟೆ ಎಪಿಎಂಸಿ | ಕೃಷ್ಣಪ್ಪ ಅಧ್ಯಕ್ಷ, ಶಿವಮ್ಮ ಮೇಟಿ ಉಪಾಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 15:38 IST
Last Updated 15 ಜೂನ್ 2020, 15:38 IST
ಬಾಗಲಕೋಟೆ ಎಪಿಎಂಸಿಗೆ ಸೋಮವಾರ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ಪ ಲಮಾಣಿ ಹಾಗೂ ಶಿವಮ್ಮ ಮೇಟಿ ಅವರೊಂದಿಗೆ ಶಾಸಕ ವೀರಣ್ಣ ಚರಂತಿಮಠ ವಿಜಯದ ಸಂಕೇತ ಪ್ರದರ್ಶಿಸಿದರು
ಬಾಗಲಕೋಟೆ ಎಪಿಎಂಸಿಗೆ ಸೋಮವಾರ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ಪ ಲಮಾಣಿ ಹಾಗೂ ಶಿವಮ್ಮ ಮೇಟಿ ಅವರೊಂದಿಗೆ ಶಾಸಕ ವೀರಣ್ಣ ಚರಂತಿಮಠ ವಿಜಯದ ಸಂಕೇತ ಪ್ರದರ್ಶಿಸಿದರು   

ಬಾಗಲಕೋಟೆ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದರು.

ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣಪ್ಪ ಲಮಾಣಿ ಚುನಾವಣೆಯಲ್ಲಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಶಿವಮ್ಮ ಮೇಟಿ ಅವಿರೋಧವಾಗಿ ಆಯ್ಕೆಯಾದರು. ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ಪ ಲಮಾಣಿ, ಉಪಾಧ್ಯಕ್ಷೆ ಶಿವಮ್ಮ ಮೇಟಿ ಅವರನ್ನು ಶಾಸಕ ವೀರಣ್ಣ ಚರಂತಿಮಠ ಅಭಿನಂದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುರೇಶ ಕೊಣ್ಣೂರ, ತಾಲ್ಲೂಕು ಪಂಚಾಯ್ತಿ ಸದಸ್ಯ ಪರಶುರಾಮ ಛಬ್ಬಿ, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ, ಸಿದ್ದಪ್ಪ ಹೂಗಾರ, ಸಿ.ಎಂ.ಮೇಟಿ, ಸಂಗಯ್ಯ ಸರಗಣಾಚಾರಿ, ವೆಂಕಣ್ಣ ಹಲಗಲಿ, ಸಂಗಪ್ಪ ಕೊಪ್ಪದ, ಮಾನಪ್ಪ ಲಮಾಣಿ, ಅಶೋಕ ರಾಠೋಡ, ದಯಾನಂದ ನಾಯಕ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.